24/04/2026

Law Guide Kannada

Online Guide

ದೇಗುಲಗಳಿಗೆ ಭಕ್ತರು ನೀಡುವ ಹಣ ಮದುವೆ ಮಂಟಪ ನಿರ್ಮಾಣಕ್ಕೆ ಮೀಸಲು ಅಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಭಕ್ತರು ದೇವಾಲಯಗಳಿಗೆ ನೀಡುವ ಕಾಣಿಕೆಗ ಹಣವು ಮದುವೆ ಮಂಟಪಗಳ ನಿರ್ಮಾಣಕ್ಕೆ ಮೀಸಲಾಗಿಲ್ಲ ಕಲ್ಯಾಣ ಮಂಟಪಗಳನ್ನು ನಿರ್ಮಿಸುವ ಉದ್ದೇಶಕ್ಕೆ ಕಾಣಿಕೆ ಹಣ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ತಮಿಳುನಾಡಿನ ವಿವಿಧ ಸ್ಥಳಗಳಲ್ಲಿ ಐದು ದೇವಾಲಯಗಳ ಅನುದಾನದೊಂದಿಗೆ ಮದುವೆ ಮಂಟಪಗಳನ್ನು ನಿರ್ಮಿಸಲು ಸರ್ಕಾರದ ಅಧಿಕಾರವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್ ಆದೇಶದ ಮಧುರೈ ಪೀಠಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಐದು ತಮಿಳುನಾಡು ದೇವಾಲಯಗಳಿಗೆ ಸೇರಿದ ಹಣದಿಂದ ಮದುವೆ ಮಂಟಪಗಳನ್ನು ನಿರ್ಮಿಸಲು ಅನುಮತಿ ನೀಡುವ ಸರ್ಕಾರದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ವಿಕ್ರಮನಾಥ್ ಹಾಗೂ ಸಂದೀಪ ಮೆಹ್ರಾ ಅವರು ಇದ್ದ ನ್ಯಾಯಪೀಠ, ‘ಕಲ್ಯಾಣ ಮಂಟಪಗಳನ್ನು ನಿರ್ಮಿಸಬೇಕು ಎಂಬ ಉದ್ದೇಶದಿಂದ ಭಕ್ತರು ದೇವಸ್ಥಾನಗಳಿಗೆ ಕಾಣಿಕೆ ನೀಡುವುದಿಲ್ಲ. ಭಕ್ತರು ನೀಡುವ ಹಣವನ್ನು ದೇಗುಲಗಳ ಸುಧಾರಣೆ, ಸೌಲಭ್ಯಗಳ ಉನ್ನತೀಕರಣಕ್ಕೆ ಬಳಕೆ ಮಾಡಬೇಕು ಎಂದು ತಿಳಿಸಿದೆ.

ಆಗಸ್ಟ್ 19 ರಂದು ಹೈಕೋರ್ಟ್ ತನ್ನ ಆದೇಶದಲ್ಲಿ, ಮದುವೆ ಸಮಾರಂಭಗಳಿಗೆ ನೀಡುವ ಮೂಲಕ ಬಾಡಿಗೆ ಉದ್ದೇಶಗಳಿಗಾಗಿ ಮದುವೆ ಮಂಟಪಗಳನ್ನು ನಿರ್ಮಿಸುವ ಸರ್ಕಾರದ ನಿರ್ಧಾರವು “ಧಾರ್ಮಿಕ ಉದ್ದೇಶಗಳ” ವ್ಯಾಖ್ಯಾನದಲ್ಲಿಲ್ಲ ಎಂದು ಹೇಳಿದೆ.

ವಿಚಾರಣೆ ವೇಳೆ, ‘ದೇವಸ್ಥಾನ ಆವರಣದಲ್ಲಿ ನಿರ್ಮಿಸಿರುವ ಕಲ್ಯಾಣ ಮಂಟಪದಲ್ಲಿ ಒಂದು ಮದುವೆ ಸಮಾರಂಭವಿತ್ತು ಎಂದು ಭಾವಿಸೋಣ. ಅಲ್ಲಿ, ಎಲ್ಲ ರೀತಿಯ ಅಶ್ಲೀಲ ಹಾಡುಗಳನ್ನು ಹಾಡಲಾಗುತ್ತದೆ. ಈ ರೀತಿ ಮಾಡುವುದರಿಂದ ದೇವಸ್ಥಾನದ ಜಾಗದ ಬಳಕೆಯ ಉದ್ದೇಶ ಈಡೇರಿದಂತಾಗಲಿದೆಯೇ’ ಎಂದು ಪೀಠ ಪ್ರಶ್ನಿಸಿದೆ.

ದೇವಾಲಯದ ಆವರಣದಲ್ಲಿ ಮದುವೆ ಪಾರ್ಟಿ ನಡೆಯುತ್ತಿದ್ದರೆ ಮತ್ತು ಎಲ್ಲಾ ರೀತಿಯ ಅಶ್ಲೀಲ ಹಾಡುಗಳನ್ನು ನುಡಿಸುತ್ತಿದ್ದರೆ, ಅದು ದೇವಾಲಯದ ಭೂಮಿಯ ಉದ್ದೇಶವೇ?” ಎಂದು ನ್ಯಾಯಪೀಠ ಪ್ರಶ್ನಿಸಿತು. ಬದಲಿಗೆ ಉನ್ನತ ನ್ಯಾಯಾಲಯವು ಅಂತಹ ಹಣವನ್ನು ಶಿಕ್ಷಣ ಮತ್ತು ವೈದ್ಯಕೀಯ ಸಂಸ್ಥೆಗಳಂತಹ ದತ್ತಿ ಉದ್ದೇಶಗಳಿಗೆ ಬಳಸಬೇಕೆಂದು ಸೂಚಿಸಿತು. ‘ಕಲ್ಯಾಣ ಮಂಟಪಗಳನ್ನು ನಿರ್ಮಿಸಬೇಕು ಎನ್ನುವ ಸರ್ಕಾರದ ನಿರ್ಧಾರ ಸರಿ ಇದೆಯೋ ಅಥವಾ ತಪ್ಪಿದೆಯೋ ಎಂಬುದೇ ನಮ್ಮ ಮುಂದಿರುವ ವಿಚಾರ. ಹೀಗಾಗಿ, ಈ ಹಂತದಲ್ಲಿ ನಾವು ಯಾವುದೇ ತಡೆಯಾಜ್ಞೆ ನೀಡುವುದಿಲ್ಲ’ ಎಂದ ಪೀಠ, ವಿಚಾರಣೆಯನ್ನು ನವೆಂಬರ್ 19ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಇತರ ವಕೀಲರು ತಡೆಯಾಜ್ಞೆ ನೀಡುವಂತೆ ಕೋರಿದರು.

ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಕಾಣಿಕೆ ಬಳಸಿ ಕಲ್ಯಾಣ ಮಂಟಪಗಳನ್ನು ನಿರ್ಮಿಸಿ, ಅವುಗಳನ್ನು ಬಾಡಿಗೆಗೆ ಕೊಡಬೇಕು ಎಂಬ ಸರ್ಕಾರದ ನಿರ್ಧಾರವು ‘ಧಾರ್ಮಿಕ ಉದ್ದೇಶ’ಗಳ ವ್ಯಾಪ್ತಿಗೆ ಬರುವುದಿಲ್ಲ. ಈ ಹಣವನ್ನು ಸಾರ್ವಜನಿಕ ಅಥವಾ ಸರ್ಕಾರದ ನಿಧಿ ಎಂಬುದಾಗಿ ಪರಿಗಣಿಸಬಾರದು’ ಎಂದೂ ಮದುರೈ ಪೀಠ ಹೇಳಿತ್ತು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.