Section 3(1)(b) of the Judges (Investigation) Act Archives - Law Guide Kannada https://www.lawguidekannada.com/tag/section-31b-of-the-judges-investigation-act/ Online Guide Thu, 12 Dec 2024 06:39:30 +0000 en-US hourly 1 https://wordpress.org/?v=7.0.2 http://www.lawguidekannada.com/wp-content/uploads/2022/09/cropped-Logo_512-32x32.jpg Section 3(1)(b) of the Judges (Investigation) Act Archives - Law Guide Kannada https://www.lawguidekannada.com/tag/section-31b-of-the-judges-investigation-act/ 32 32 ವಿವಾದಾತ್ಮಕ ಹೇಳಿಕೆ ಆರೋಪ: ಹೈಕೋರ್ಟ್ ಜಡ್ಜ್ ಪದಚ್ಯುತಿಗೆ ಸಹಿ ಹಾಕಿದ 36 ಸಂಸದರರು http://www.lawguidekannada.com/controversial-statement-allegation-36-mps-signed-the-high-court-judge-impeachment/ Thu, 12 Dec 2024 06:37:23 +0000 http://www.lawguidekannada.com/?p=1134 ನವದೆಹಲಿ: ಕಾರ್ಯಕ್ರಮವೊಂದರಲ್ಲಿ “ನೀವು ತ್ರಿವಳಿ ತಲಾಖ್ ನೀಡುವಂತಿಲ್ಲ, ನಾಲ್ಕು ಪತ್ನಿ ಹೊಂದುವಂತಿಲ್ಲ ಎಂದು ಹೇಳಿಕೆ ನೀಡಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರೊಬ್ಬರ...

The post ವಿವಾದಾತ್ಮಕ ಹೇಳಿಕೆ ಆರೋಪ: ಹೈಕೋರ್ಟ್ ಜಡ್ಜ್ ಪದಚ್ಯುತಿಗೆ ಸಹಿ ಹಾಕಿದ 36 ಸಂಸದರರು appeared first on Law Guide Kannada.

]]>
ನವದೆಹಲಿ: ಕಾರ್ಯಕ್ರಮವೊಂದರಲ್ಲಿ “ನೀವು ತ್ರಿವಳಿ ತಲಾಖ್ ನೀಡುವಂತಿಲ್ಲ, ನಾಲ್ಕು ಪತ್ನಿ ಹೊಂದುವಂತಿಲ್ಲ ಎಂದು ಹೇಳಿಕೆ ನೀಡಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರೊಬ್ಬರ ಪದಚ್ಯುತಿಗೆ 36 ಸಂಸದರು ಸಹಿ ಹಾಕಿದ್ದಾರೆ ಕಳೆದ ವಾರ ವಿಶ್ವಹಿಂದೂ ಪರಿಷತ್ (ವಿಹೆಚ್ ಪಿ) ಕಾರ್ಯಕ್ರಮದಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಅವರು ನೀಡಿದ್ದ ಈ ಹೇಳಿಕೆ ದೇಶವ್ಯಾಪಿ ಸದ್ದು ಮಾಡುತ್ತಿದ್ದು, ಈ ಹೇಳಿಕೆಯನ್ನ ಖಂಡಿಸಿರುವ IಓಆIಂ ಮೈತ್ರಿಕೂಟದ ರಾಜ್ಯಸಭೆಯ 36 ಸಂಸದರು ನ್ಯಾಯಾಧೀಶರ ವಿರುದ್ಧ ಮಹಾಭಿಯೋಗ (ವಿಚಾರಣೆಗೆ ಒಳಪಡಿಸಿ ಪದಚ್ಯುತಿಗೊಳಿಸುವ ಪ್ರಕ್ರಿಯೆ) ಕ್ಕೆ ಸಹಿ ಹಾಕಿದ್ದಾರೆ.

ಮಹಾಭಿಯೋಗ ಅರ್ಜಿಗೆ ಪಕ್ಷೇತರ ಸಂಸದ ಕಪಿಲ್ ಸಿಬಲ್ ಸೇರಿದಂತೆ ವಿಪಕ್ಷಗಳ ಸಂಸದರು ಸಹಿ ಹಾಕಿದ್ದಾರೆ. ಕಾಂಗ್ರೆಸ್ನ ದಿಗ್ವಿಜಯ ಸಿಂಗ್, ಜೈರಾಮ್ ರಮೇಶ್, ಮತ್ತು ವಿವೇಕ್ ತಂಖಾ ಮುಂತಾದ ಪ್ರಮುಖ ನಾಯಕರು ಇದ್ದಾರೆ, ಇವರನ್ನು ಹೊರತುಪಡಿಸಿ, ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್; ತೃಣಮೂಲ ಕಾಂಗ್ರೆಸ್ಸಿನ ಸಾಕೇತ್ ಗೋಖಲೆ ಮತ್ತು ಸಾಗರಿಕಾ ಘೋಷ್; ಆರ್ಜೆಡಿಯ ಮನೋಜ್ ಕುಮಾರ್ ಝಾ; ಸಮಾಜವಾದಿ ಪಕ್ಷದ ಜಾವೇದ್ ಅಲಿ ಖಾನ್; ಸಿಪಿಐ(ಎಂ)ನ ಜಾನ್ ಬ್ರಿಟಾಸ್; ಮತ್ತು ಸಿಪಿಐ ಸಂತೋಷ್ ಕುಮಾರ್ ಅವರು ಸಹಿ ಹಾಕಿದ್ದಾರೆ ಎನ್ನಲಾಗಿದೆ.

ಸಂವಿಧಾನದ 124(4) ಮತ್ತು 124(5) ವಿಧಿಗಳೊಂದಿಗೆ ನ್ಯಾಯಾಧೀಶರ (ವಿಚಾರಣೆ) ಕಾಯಿದೆಯ ಸೆಕ್ಷನ್ 3(1)(ಬಿ) ಅಡಿಯಲ್ಲಿ ನ್ಯಾಯಮೂರ್ತಿ ಯಾದವ್ ವಿರುದ್ಧ ದೋಷಾರೋಪಣೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ನೋಟಿಸ್ ದಾರಿ ಮಾಡಿಕೊಡುತ್ತದೆ.

1968ರ ನ್ಯಾಯಾಧೀಶರ ವಿಚಾರಣೆ ಕಾಯಿದೆಯ ಪ್ರಕಾರ, ಮೇಲ್ಮನೆಯಲ್ಲಿ ಅದನ್ನು ಆರಂಭಿಸಬೇಕಾದರೆ, ನ್ಯಾಯಾಧೀಶರ ವಿರುದ್ಧದ ದೂರನ್ನು ಲೋಕಸಭೆಯಲ್ಲಿ ಕನಿಷ್ಠ 100 ಸದಸ್ಯರು ಅಥವಾ ರಾಜ್ಯಸಭೆಯಲ್ಲಿ 50 ಸಂಸದರು ಸಹಿ ಮಾಡಿದ ನಿರ್ಣಯದ ಮೂಲಕ ಬೆಂಬಲಿಸಬೇಕು. ವಿರೋಧ ಪಕ್ಷದ ಪಾಳೆಯದ ಮೂಲಗಳ ಪ್ರಕಾರ, ಅವರು ತಾವು ಸಲ್ಲಿಸಲಿರುವ ಅರ್ಜಿಯ ಜೊತೆಗೆ ನ್ಯಾಯಮೂರ್ತಿ ಯಾದವ್ ಅವರ ಭಾಷಣದ ಪ್ರತಿಗಳು ಮತ್ತು ಸುದ್ದಿ ಲೇಖನಗಳ ಲಿಂಕ್ಗಳು, ವಿಡಿಯೋ ಕ್ಲಿಪ್ ಗಳು ಇರಲಿವೆ.

ನ್ಯಾಯಮೂರ್ತಿ ಯಾದವ್ ಹೇಳಿದ್ದೇನು ಗೊತ್ತೆ…?
ಭಾನುವಾರ ಅಲಹಾಬಾದ್ ಹೈಕೋರ್ಟ್ನಲ್ಲಿ ವಿಎಚ್ಪಿಯ ಕಾನೂನು ಕೋಶ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್, “ನಮ್ಮ ಶಾಸ್ತ್ರಗಳು ಮತ್ತು ವೇದಗಳಲ್ಲಿ ದೇವತೆ ಎಂದು ಗುರುತಿಸಲ್ಪಟ್ಟ ಮಹಿಳೆಯನ್ನು ನೀವು ಅಗೌರವಿಸಲು ಸಾಧ್ಯವಿಲ್ಲ. ನೀವು ನಾಲ್ಕು ಹೆಂಡತಿಯರನ್ನು ಹೊಂದಲು, ಹಲಾಲಾ ಮಾಡಲು ಅಥವಾ ತ್ರಿವಳಿ ತಲಾಖ್ ನೀಡುವುದು ಸಾಧ್ಯವಿಲ್ಲ. ‘ತ್ರಿವಳಿ ತಲಾಖ್’ ಹೇಳುವ ಹಕ್ಕು ನಮಗಿದೆಯೇ ಹೊರತು ಮಹಿಳೆಯರಿಗೆ ಜೀವನಾಂಶ ನೀಡುವುದಿಲ್ಲ ಎಂದು ನೀವು ಹೇಳುತ್ತೀರಿ ಎಂದು ಹೇಳಿದ್ದರು.

ಈ ಹೇಳಿಕೆ ವಿರುದ್ದ ವಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಇದು ವಿವಾದಾತ್ಮಕ ಹೇಳಿಗೆ ಎಂದು ಹೇಳುತ್ತಿವೆ. ಇದೇ ವೇಳೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹೇಳಿಕೆ ಕುರಿತು ವರದಿ ಕೇಳಿದೆ.

ನಿರ್ಣಯ ಹಾಗೂ ಮಹಾಭಿಯೋಗದ ಪ್ರಕ್ರಿಯೆ ಹೇಗಿರುತ್ತೆ ಪ್ರಸ್ತಾವನೆಯನ್ನು ಸಲ್ಲಿಸಿದ ನಂತರ, ಸದನದ ಅಧ್ಯಕ್ಷರು ಅದನ್ನು ಸ್ವೀಕರಿಸುವ ಅಥವಾ ತಿರಸ್ಕರಿಸುವ ವಿವೇಚನೆಯನ್ನು ಹೊಂದಿರುತ್ತಾರೆ. ಪ್ರಸ್ತಾವನೆಯನ್ನು ಅಂಗೀಕರಿಸಲ್ಪಟ್ಟರೆ, ದೂರಿನ ತನಿಖೆ ಮತ್ತು ದೋಷಾರೋಪಣೆ ಪ್ರಕ್ರಿಯೆಗಳ ಪ್ರಾರಂಭವನ್ನು ಇದು ಸಮರ್ಥಿಸುತ್ತದೆಯೇ ಎಂದು ನಿರ್ಧರಿಸಲು ಇಬ್ಬರು ನ್ಯಾಯಾಧೀಶರು ಮತ್ತು ನ್ಯಾಯಶಾಸ್ತ್ರಜ್ಞರನ್ನು ಒಳಗೊಂಡ ಮೂರು ಸದಸ್ಯರ ಸಮಿತಿಯನ್ನು ರಚಿಸಲಾಗುತ್ತದೆ.

ದೋಷಾರೋಪಣೆ ದೂರಿನ ತನಿಖೆಗಾಗಿ ರಚಿಸಲಾದ ಸಮಿತಿಯು ಒಬ್ಬ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮತ್ತು ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ದೂರು ಇದ್ದಲ್ಲಿ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡಿರುತ್ತದೆ. ಸುಪ್ರೀಂ ಕೋರ್ಟ್ ಹಾಲಿ ನ್ಯಾಯಾಧೀಶರ ವಿರುದ್ಧ ದೂರು ಬಂದರೆ, ಇಬ್ಬರು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭಾಗಿಯಾಗುತ್ತಾರೆ.

ಸಂವಿಧಾನದ ಅನುಚ್ಛೇದ 124(4)ರ ಪ್ರಕಾರ, ಮಹಾಭಿಯೋಗ ನಿರ್ಣಯವನ್ನು ಸದನದ ಒಟ್ಟು ಸದಸ್ಯಬಲದ ಪೈಕಿ ಬಹುಮತದಿಂದ ಬೆಂಬಲಿಸಬೇಕು, ಹಾಗೆಯೇ ಲೋಕಸಭೆ ಮತ್ತು ರಾಜ್ಯಗಳೆರಡರಲ್ಲೂ ಹಾಜರಿರುವ ಮತ್ತು ಮತ ಚಲಾಯಿಸುವವರ ಪೈಕಿ ಕನಿಷ್ಠ ಮೂರನೇ ಎರಡರಷ್ಟು ಸದಸ್ಯರು ಬೆಂಬಲಿಸಬೇಕು.

ಉಭಯ ಸದನಗಳಲ್ಲಿ ಎನ್ಡಿಎ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ ಲೋಕಸಭೆ ಅಥವಾ ರಾಜ್ಯಸಭೆಯಲ್ಲಿ ಮಹಾಭಿಯೋಗ ನಿರ್ಣಯ ಅಂಗೀಕಾರವಾಗುವ ಸಾಧ್ಯತೆ ಕಡಿಮೆ ಇದೆ.

ಹೈಕೋರ್ಟ್ ನ್ಯಾಯಾಧೀಶರನ್ನು ದೋಷಾರೋಪಣೆ ಮಾಡಲು ನಾಲ್ಕು ಪ್ರಯತ್ನಗಳು ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ತೆಗೆದುಹಾಕಲು ಎರಡು ಪ್ರಯತ್ನಗಳು ನಡೆದಿವೆ, 2018 ರಲ್ಲಿ ಆಗಿನ ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಮಹಾಭಿಯೋಗಕ್ಕೆ ಪ್ರಯತ್ನ ನಡೆದಿತ್ತು. ಆದರೆ ಈ ಯಾವುದೇ ನಿರ್ಣಯಗಳು ದೋಷಾರೋಪಣೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿಲ್ಲ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

The post ವಿವಾದಾತ್ಮಕ ಹೇಳಿಕೆ ಆರೋಪ: ಹೈಕೋರ್ಟ್ ಜಡ್ಜ್ ಪದಚ್ಯುತಿಗೆ ಸಹಿ ಹಾಕಿದ 36 ಸಂಸದರರು appeared first on Law Guide Kannada.

]]>