07/03/2026

Law Guide Kannada

Online Guide

CJI ಬಿ.ಆರ್ ಗವಾಯಿ ಮೇಲೆ ಶೂ ಎಸೆತ: ವಕೀಲ ರಾಕೇಶ್ ಕಿಶೋರ್ ವಿರುದ್ದ ನ್ಯಾಯಾಂಗ ನಿಂದನೆ ಕ್ರಮ ಕೈಬಿಟ್ಟ ಸುಪ್ರೀಂ

ನವದೆಹಲಿ: ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ವಿಚಾರಣೆ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಸುಪ್ರೀಂಕೋರ್ಟ್ ಕೈಬಿಟ್ಟಿದೆ.

ಅಕ್ಟೋಬರ್ 6 ರಂದು ಈ ಘಟನೆ ನಡೆದಿತ್ತು. ವಿಷ್ಣು ವಿಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ವಿಚಾರಣೆ ವೇಳೆಯಲ್ಲಿ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆಯಲು ವಕೀಲ ರಾಕೇಶ್ ಕಿಶೋರ್ ಯತ್ನಿಸಿದ್ದರು.

ರಾಕೇಶ್ ಕಿಶೋರ್ ಅವರ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಎಸ್ಸಿಬಿಎ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ.

ಈ ಮಧ್ಯೆ ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಕೈಬಿಡಲಾಗಿದ್ದು, ಈ ಬಗ್ಗೆ ಒಲವು ಹೊಂದಿಲ್ಲ ಸುಪ್ರೀಂ ಕೋರ್ಟ್ ಹೇಳಿದೆ. ಸ್ವತಃ ಸಿಜೆಐ ಅವರೇ ವಕೀಲರ ವಿರುದ್ಧ ಪ್ರಕ್ರಿಯೆ ಮುಂದುವರಿಯಲು ನಿರಾಕರಿಸಿದ್ದಾರೆ.

ಸಿಜೆಐ ಮೇಲೆ ಶೂ ಎಸೆದ ವಕೀಲರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡುವುದರಿಂದ ಅನಗತ್ಯವಾಗಿ ಪ್ರಾಮುಖ್ಯತೆ ನೀಡಿದಂತಾಗಲಿದೆ ಎಂದು ನ್ಯಾಯಾಲಯವು ಅರ್ಜಿದಾರರಾದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (SCBA) ಗೆ ತಿಳಿಸಿದೆ.

ನ್ಯಾಯಾಲಯದಲ್ಲಿ ಘೋಷಣೆ ಕೂಗುವುದು ಮತ್ತು ಶೂ ಎಸೆಯುವುದು ನ್ಯಾಯಾಂಗ ನಿಂದನೆಯ ಸ್ಪಷ್ಟ ಪ್ರಕರಣಗಳಾಗಿವೆ. ಆದರೆ ಇದು ಸಂಬಂಧಪಟ್ಟ ನ್ಯಾಯಾಧೀಶರ ಮೇಲೆ ಅವಲಂಬಿತವಾಗಿದೆ. ಅಂತಹ ಘಟನೆಗಳನ್ನು ತಡೆಯಲು ಮಾರ್ಗಸೂಚಿಗಳನ್ನು ಹಾಕುವುದನ್ನು ಪರಿಗಣಿಸುವುದಾಗಿ ನ್ಯಾಯಪೀಠ ತಿಳಿಸಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.