ಲಾ ಗೈಡ್ ವತಿಯಿಂದ ಶಾರದ ವಿಲಾಸ ಕಾನೂನು ಕಾಲೇಜು ವಿದ್ಯಾರ್ಥಿಗಳ ದತ್ತಿ ಪ್ರಶಸ್ತಿಗಾಗಿ 1 ಲಕ್ಷ ರೂಪಾಯಿ ಕೊಡುಗೆ
ಪ್ರೊ ಸಿ ಕೆ ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ ಕೆ ಅರ್ ಸುಬ್ಬಕೃಷ್ಣ ಅವರ ಸ್ಮರಣಾರ್ಥ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ವತಿಯಿಂದ ಭಾರತದ ಸಂವಿಧಾನ ವಿಷಯದಲ್ಲಿ ಹೆಚ್ಚು ಅಂಕ ಪಡೆದ ಕಾನೂನು ವಿದ್ಯಾರ್ಥಿಗೆ ಪ್ರತಿ ವರ್ಷ ನಗದು ಬಹುಮಾನವನ್ನು ಘೋಷಣೆ ಮಾಡಲಾಗಿದೆ. ಇದಕ್ಕಾಗಿ ಒಂದು ಲಕ್ಷ ರೂಪಾಯಿಯನ್ನು ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಗೌರವ ಸಂಪಾದಕರು ಹಾಗೂ ಹಿರಿಯ ವಕೀಲರಾದ ಎಚ್ ಎನ್ ವೆಂಕಟೇಶ್ ಕಾಲೇಜು ಆಡಳಿತ ಮಂಡಳಿಗೆ ನೀಡಿದ್ದಾರೆ. 1 ಲಕ್ಷ ಠೇವಣಿ ರೂಪದಲ್ಲಿ ಇಟ್ಟು ಅದರಿಂದ ಪ್ರತಿ ವರ್ಷವೂ ಬರುವ ಹಣವನ್ನು ಭಾರತದ ಸಂವಿಧಾನ ವಿಷಯದಲ್ಲಿ ಹೆಚ್ಚು ಅಂಕ ಪಡೆದ ಕಾನೂನು ವಿದ್ಯಾರ್ಥಿಗೆ ಪ್ರಶಸ್ತಿ ರೂಪದಲ್ಲಿ ನೀಡಲು ತಿಳಿಸಿದ್ದಾರೆ.

ಇಂದು ಶಾರದಾ ವಿಲಾಸ ಕಾನೂನು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ (IQAC) ವತಿಯಿಂದ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಹಿರಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಘೋಷಣೆ ಮಾಡಿದರು.

ಈ ವೇಳೆ ಕಾರ್ಯಕ್ರಮದಲ್ಲಿ ಕಾನೂನು ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಶ್ರೀ ಇ.ಎಸ್. ಇಂದ್ರೇಶ್, ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಹಾಗೂ ‘ಲಾ ಗೈಡ್’ ಕನ್ನಡ ಕಾನೂನು ಮಾಸಪತ್ರಿಕೆಯ ಗೌರವ ಸಂಪಾದಕರಾದ ಹಿರಿಯ ವಕೀಲರಾದ ಹೆಚ್.ಎನ್. ವೆಂಕಟೇಶ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಶಾರದಾವಿಲಾಸ ಶಿಕ್ಷಣ ಸಂಸ್ಥೆಯ ಹಿರಿಯ ಆಡಳಿತ ಮಂಡಳಿ ಸದಸ್ಯ ಶ್ರೀ ಎಸ್.ಎಲ್. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಮೈಸೂರು ವಕೀಲರ ಸಂಘದ ಅಧ್ಯಕ್ಷ ಶ್ರೀ ಎಸ್. ಲೋಕೇಶ್, ಸಂಸ್ಥೆಯ ಗೌರವ ಕಾರ್ಯದರ್ಶಿ ಶ್ರೀ ಆರ್. ದಿನೇಶ್ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಂಸ್ಥೆಯ ಹಳೆಯ ವಿದ್ಯಾರ್ಥಿಗಳು, ಕಾನೂನು ವಿದ್ಯಾರ್ಥಿಗಳು ಹಾಗೂ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ತಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಎಚ್ ಎನ್ ವೆಂಕಟೇಶ್ ಶಾರದ ವಿಲಾಸ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಬಗ್ಗೆ ವಿವರವಾಗಿ ತಿಳಿಸಿದರು. ಇಲ್ಲಿ ಓದಿದ ವಿದ್ಯಾರ್ಥಿಗಳು ಇಂದು ದೇಶದ ಎಲ್ಲಾ ಭಾಗದಲ್ಲೂ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ್ದಾರೆ. ಈ ಮೂಲಕ ದೇಶವನ್ನು ಮುನ್ನಡೆಸುತ್ತಿದ್ದಾರೆ. ಇದಕ್ಕೆ ಕಾರಣ ನಮ್ಮ ಕಾಲೇಜು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಂದವರಿದ ನಾನು ಸಹಾ ಇದೇ ಕಾಲೇಜಿನ ವಿದ್ಯಾರ್ಥಿಯಾಗಿದ್ದೆ. ಈ ಪರಂಪರೆ ಇದೇ ರೀತಿ ಮುಂದುವರಿಯಲಿ ಅನ್ನೋದು ನನ್ನ ಆಶಯ. ಹೀಗಾಗಿ ಸಂವಿಧಾನ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಒಬ್ಬ ವಿದ್ಯಾರ್ಥಿಗೆ ಲಾಗೈಡ್ ವತಿಯಿಂದ ನಗದು ದತ್ತಿ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಅದಕ್ಕಾಗಿ ಶಾರದ ವಿಲಾಸ ಕಾನೂನು ಕಾಲೇಜು ಮಂಡಳಿಗೆ ಒಂದು ಲಕ್ಷ ರೂಪಾಯಿ ಚೆಕ್ನ್ನು ದೇಣಿಗೆ ನೀಡಿರುವುದಾಗಿ ಅವರು ತಿಳಿಸಿದರು. ಪ್ರತಿ ವರ್ಷವೂ ಪ್ರೊ ಸಿ ಕೆ ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ ಕೆ ಅರ್ ಸುಬ್ಬಕೃಷ್ಣ ಅವರ ಸ್ಮರಣಾರ್ಥ ಈ ಪ್ರಶಸ್ತಿ ನೀಡಲಾಗುವುದು ಎಂದು ಸಹಾ ಹೇಳಿದರು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿ
Instagram / FB Links
- https://www.instagram.com/
reel/DYo50LTEdiG/?igsh= OGpuNG15a3pmcThn - https://www.instagram.com/
reel/DYo31h5lMLf/?igsh= b2w1cDRnOGR4dmcz - https://www.facebook.com/
share/r/1Czns4mWZG/ - https://www.facebook.com/
share/v/1EFXBn2wbX/ - https://www.instagram.com/
reel/DYo-yP2FOp-/?igsh= MXI2ZW9wYXowN2g4 - https://www.facebook.com/
share/v/1HafF4JziK/
