05/06/2026

Law Guide Kannada

Online Guide

6 ವಕೀಲರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಸುಪ್ರಿಂ ಕೊಲೀಜಿಯಂ ಶಿಫಾರಸ್ಸು

ಬೆಂಗಳೂರು: ಆರು ಮಂದಿ ವಕೀಲರನ್ನು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡುವ ಬಗ್ಗೆ ಸುಪ್ರೀಂ ಕೋರ್ಟ್ ಕೊಲೀಜಿಯಂ ಶಿಫಾರಸ್ಸು ಮಾಡಿದೆ.

ರಾಘವೇಂದ್ರ ಸೀತಾರಾಮ ಶ್ರೀವಾತ್ಸವ, ಹೇಮಾ ಕುಲಕರ್ಣಿ, ಸುಬ್ರಮಣ್ಯ ರಂಗಾರಾವ್, ಟಿ.ಪಿ. ವಿವೇಕಾನಂದ, ಬಕ್ಕೇಶ್ವರ ಪ್ರಮೋದ್, ಹೊಂಬೇಗೌಡ ಶಾಂತಿಭೂಷಣ್ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕವಾಗಲು ಶಿಫಾರಸ್ಸುಗೊಂಡ ವಕೀಲರು.

ಜೂನ್ 2ರಂದು ನಡೆದ ಸಭೆಯಲ್ಲಿ ಕರ್ನಾಟಕ ಹೈಕೋರ್ಟ್ ಪೀಠಕ್ಕೆ 6 ಮಂದಿ ವಕೀಲರ ಹೆಸರುಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಮತ್ತು ಸುಪ್ರೀಂ ಕೋರ್ಟ್ ನ ಇಬ್ಬರು ಹಿರಿಯ ನ್ಯಾಯಾಧೀಶರನ್ನು ಒಳಗೊಂಡ ಕೊಲಿಜಿಯಂ ಶಿಫಾರಸು ಮಾಡಿದೆ.

ಕೆಳ ದಿನಗಳ ಹಿಂದೆಯಷ್ಟೇ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದ್ದು, ಆ ಮೂವರು ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ಹೈಕೋರ್ಟ್ಲ್ಲಿ 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಶಿಫಾರಸ್ಸುಗೊಂಡಿರುವ ವಕೀಲರ ಹೆಸರಿಗೆ ಒಪ್ಪಿಗೆ ದೊರೆತರೆ ನ್ಯಾಯಮೂರ್ತಿಗಳ ಸಂಖ್ಯೆ 54 ಕ್ಕೆ ಏರಿಕೆಯಾಗಲಿದೆ. ಎಚ್ ಶಾಂತಿಭೂಷಣ್ ಅವರು ಸದ್ಯ ಡೆಪ್ಯೂಟಿ ಸಾಲಿಸಿಟರ್ ಜನರಲ್ ಆಗಿ ಕರ್ನಾಟಕ ಹೈಕೋರ್ಟ್ ನಲ್ಲಿ ಕೇಂದ್ರ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

Copyright © All rights reserved. | Newsphere by AF themes.