ಅಪಘಾತ ಪ್ರಕರಣ: ಹಕ್ಕುದಾರರ ಬ್ಯಾಂಕ್ ಖಾತೆಗೆ ಪರಿಹಾರ ವರ್ಗಾವಣೆಗೆ ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ಅಪಘಾತ ಪ್ರಕರಣಗಳಲ್ಲಿ ಪರಿಹಾರವನ್ನು ನೇರವಾಗಿ ಹಕ್ಕುದಾರರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲು ವಿಮಾ ಕಂಪನಿಗಳಿಗೆ ನಿರ್ದೇಶನ ನೀಡಬೇಕು ಎಂದು ವಿಚಾರಣಾ ನ್ಯಾಯಾಲಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೆ.ಕೆ. ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ರಾಜೇಂದ್ರ ಬಿಂದಲ್ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ. ಪರಮಿಂದರ್ ಸಿಂಗ್ ಗಿs ಹನಿ ಗೋಯಲ್ ಪ್ರಕರಣದಲ್ಲಿ ಈ ತೀರ್ಪು ಪ್ರಕಟಿಸಲಾಗಿದೆ.
ಮೋಟಾರು ಅಪಘಾತ ಪ್ರಕರಣದಲ್ಲಿ ಪರಿಹಾರ ನೀಡುವಲ್ಲಿ ಆಗುವ ವಿಳಂಬವನ್ನು ತಪ್ಪಿಸಲು ಮತ್ತು ಅಪಘಾತದ ಪರಿಹಾರದ ವಿತರಣೆಯನ್ನು ಸುಲಭಗೊಳಿಸಲು ನ್ಯಾಯಾಲಯಗಳು ವಿಮಾ ಕಂಪೆನಿಗಳಿಗೆ ಪರಿಹಾರವನ್ನು ನೇರವಾಗಿ ಹಕ್ಕುದಾರರನ ಬ್ಯಾಂಕ್ ಖಾತೆಗೆ ವರ್ಗಾಯಿಸಲು ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಸೂಚಿಸಿದೆ.
ಕ್ಷೇಮುದಾರರಿಗೆ ಹಣ ಸಂದಾಯ ಮಾಡುವ ಪ್ರಕ್ರಿಯೆ ವಿಳಂಬವಾಗಿ ನಡೆಯುತ್ತಿದೆ. ಇದನ್ನು ತಡೆಗಟ್ಟಲು ವಿಮಾ ಕಂಪೆನಿಗಳು ಕ್ಷೇಮುದಾರರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗವಣೆ ಮಾಡಲು ನಿರ್ದೇಶನ ನೀಡಬೇಕು. ಕ್ಷೇಮುದಾರರಿಂದ ಸೂಕ್ತ ದಾಖಲೆಯನ್ನು ಪಡೆದು ಸಮರ್ಪಕ ಪರಿಶೀಲನೆ ಬಳಿಕ ವಿಮಾ ಕಂಪೆನಿ ಇತರ ಹೊಣೆಗಾರರು ಬಾಧ್ಯಸ್ಥರು ಹಣ ವರ್ಗಾವಣೆ ಮಾಡಬೇಕು. ಈ ನಿಟ್ಟಿನಲ್ಲಿ ವಿಚಾರಣಾ ನ್ಯಾಯಾಲಯಗಳು ಸೂಕ್ತ ಆದೇಶ ಹೊರಡಿಸಬೇಕಾಗಿದೆ ಎಂದು ತೀರ್ಪಿನಲ್ಲಿ ಹೇಳಿದೆ. ಈ ಆದೇಶದ ಪ್ರತಿಯನ್ನು ದೇಶದ ಎಲ್ಲ ರಾಜ್ಯಗಳ ಹೈಕೋರ್ಟ್ ರಿಜಿಸ್ಟ್ರಿಗಳಿಗೆ ಕಳುಹಿಸುವಂತೆ ನ್ಯಾಯಪೀಠ ಸೂಚಿಸಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ