06/03/2026

Law Guide Kannada

Online Guide

ರಾಹುಲ್ ಗಾಂಧಿ ವಿರುದ್ದದ ಮಾನನಷ್ಟ ಕೇಸ್ ರದ್ದುಗೊಳಿಸಿದ ಕೋರ್ಟ್

ಬೆಂಗಳೂರು: ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದ ವೇಳೆ 40% ಕಮಿಷನ್ ಆರೋಪ ಮಾಡಿ” ಜಾಹೀರಾತುಗಳನ್ನು ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನನಷ್ಟ ಪ್ರಕರಣವನ್ನು ರದ್ದುಗೊಳಿಸಿದ್ದು, ವಿಚಾರಣೆಯನ್ನು ಮುಂದುವರಿಸಲು ಅವಕಾಶ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗಕ್ಕೆ ಸಮಾನವಾಗುತ್ತದೆ ಎಂದು ಹೇಳಿದೆ.

ಕರ್ನಾಟಕ ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್ ಪ್ರತಿನಿಧಿಸಿರುವ ಬಿಜೆಪಿ, ರಾಹುಲ್ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು.

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಪ್ರಕಟಿಸಿದ್ದ ಜಾಹೀರಾತುಗಳು ಮತ್ತು ಪ್ರಚಾರ ಘೋಷಣೆಗಳು ಈ ವಿವಾದದ ಕೇಂದ್ರವಾಗಿದ್ದವು. ಆ ಜಾಹೀರಾತುಗಳಲ್ಲಿ, ಆಗ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಸಾರ್ವಜನಿಕ ಕಾಮಗಾರಿಗಳಿಗಾಗಿ ಗುತ್ತಿಗೆದಾರರು ಮತ್ತು ಇತರರಿಂದ 40 ಶೇಕಡಾ ಕಮಿಷನ್/ಲಂಚ ವಸೂಲಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಬಿಜೆಪಿ ತನ್ನ ದೂರಿನಲ್ಲಿ, ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ತನ್ನ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ನಾಯಕರು ಸುಳ್ಳು ಜಾಹೀರಾತುಗಳನ್ನು ಹರಡಿದ್ದಾರೆ ಎಂದು ದೂರಿತ್ತು. ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿ ಹೆಸರು ಸೇರಿಸಲ್ಪಟ್ಟಿದ್ದ ರಾಹುಲ್ ಗಾಂಧಿ, ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದರ ವಿಚಾರಣೆ ನಡೆಸಿದ ನ್ಯಾಯಪೀಠವು, ಆಕ್ಷೇಪಾರ್ಹ ಹಾಗೂ ವಿವಾದಿತ ಜಾಹೀರಾತುಗಳಲ್ಲಿ ಕೆಲವು ಸಾಂವಿಧಾನಿಕ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಸರ್ಕಾರಿ ಯೋಜನೆಗಳಲ್ಲಿನ ಅಕ್ರಮಗಳ ಫಲಾನುಭವಿಗಳೆಂದು ಆರೋಪಿಸಲಾಗಿದೆ. ಆದರೆ ಜಾಹೀರಾತುಗಳಲ್ಲಿ ಉಲ್ಲೇಖಿಸಲಾದ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳು ಮಾನನಷ್ಟ ದೂರು ನೀಡಿಲ್ಲ. ಬದಲಾಗಿ ಬಿಜೆಪಿ ದೂರು ನೀಡಿದೆ ಎಂಬುದನ್ನು ನ್ಯಾಯಪೀಠ ಗಮನಿಸಿತು. ಪ್ರಸ್ತುತ ಪ್ರಕರಣದಲ್ಲಿ ಆರೋಪವು ಸ್ವತಃ ವ್ಯಂಗ್ಯಕ್ತಿಯ ರೂಪದಲ್ಲಿದ್ದು, ಅದನ್ನು ಪಕ್ಷಕ್ಕೂ ವಿಸ್ತರಿಸಲು ಪ್ರಯತ್ನಿಸಲಾಗುತ್ತಿದೆ, ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟರು.

ಜಾಹೀರಾತುಗಳಲ್ಲಿ ಬಿಜೆಪಿ ವಿರುದ್ಧ ಯಾವುದೇ ನಿರ್ದಿಷ್ಟ ಆರೋಪಗಳಿಲ್ಲ ಹಾಗೂ ಅವನ್ನು ತಮ್ಮೊಂದಿಗೆ ಸಂಪರ್ಕಿಸುವ ಯಾವುದೇ ದಾಖಲೆಗಳಿಲ್ಲ ಎಂದು ಅವರು ವಾದಿಸಿದರು. ಮಾನನಷ್ಟ ದೂರು ಸಲ್ಲಿಸಲು ಸಮರ್ಥ ವ್ಯಕ್ತಿಯಾಗಿ ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷರಿಗೆ ಅಧಿಕಾರ ನೀಡಲಾಗಿದೆ ಎಂಬುದನ್ನು ಸೂಚಿಸುವ ಯಾವುದೇ ದಾಖಲೆ ಇಲ್ಲ ಎಂದು ಹೈಕೋರ್ಟ್ ನ್ಯಾಯಪೀಠ ಗಮನಿಸಿತು.

ಆತಂಕಿತ ವ್ಯಕ್ತಿಯೇ ಮ್ಯಾಜಿಸ್ಟ್ರೇಟ್ ಮುಂದೆ ದೂರು ಸಲ್ಲಿಸಬೇಕೆಂಬ ಪ್ರಕ್ರಿಯೆಯ ಅವಶ್ಯಕತೆ ಇದೆ. ಪ್ರಸ್ತುತ ಪ್ರಕರಣದಲ್ಲಿ ಮಾನಹಾನಿಗೊಳಗಾದ ಸಂಸ್ಥೆಯೇ ದೂರು ನೀಡಬೇಕಾಗುತ್ತದೆ. ಇದು ವಿಚಾರಣೆಯನ್ನೇ ದುರ್ಬಲಗೊಳಿಸುತ್ತದೆ. ಅಲ್ಲದೆ. ರಾಹುಲ್ ಗಾಂಧಿಯವರ ಪ್ರೇರಣೆಯಿಂದ ಜಾಹೀರಾತು ಪ್ರಕಟಿಸಲಾಗಿದೆ ಎಂದು ಸ್ಥಾಪಿಸಲು ಯಾವುದೇ ದಾಖಲೆಗಳಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.

ಬಿಜೆಪಿ ದೂರಿನಲ್ಲಿ ರಾಹುಲ್ ಗಾಂಧಿ ಪ್ರಶ್ನಾರ್ಹ ಜಾಹೀರಾತುಗಳ ಲಿಂಕ್ ಗಳನ್ನು ಟ್ವಿಟ್ ಮಾಡಿದ್ದಾರೆ ಎಂದು ಹೇಳಿದ್ದರೂ, ಸಲ್ಲಿಸಿದ ದಾಖಲೆಗಳಲ್ಲಿ ಟ್ವಿಟ್ ನ ಪಠ್ಯವೇ ಸೇರಿಸಲಿಲ್ಲ ಎಂದು ನ್ಯಾಯಾಲಯ ಗಮನಿಸಿದೆ. ಆದಾಗ್ಯೂ, ವಿಚಿತ್ರವೆಂದರೆ ಪ್ರಮಾಣವಚನ ದಾಖಲಿಸುವ ವೇಳೆ ಸದರಿ ಟ್ವಿಟ್ ನ ಪಠ್ಯವನ್ನು ಇತರ ದಾಖಲೆಗಳೊಂದಿಗೆ ಗುರುತಿಸಲಾಗಿಲ್ಲ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 658 ಅನ್ವಯ ಅಗತ್ಯ ಪ್ರಮಾಣಪತ್ರವೂ ಸಲ್ಲಿಸಲಿಲ್ಲ, ಎಂದು ನ್ಯಾಯಪೀಠವುತಿಳಿಸಿದೆ.

ವಿಚಾರಣಾ ನ್ಯಾಯಾಲಯದ ಮುಂದೆ ಕೆಲವು ಪ್ರಕ್ರಿಯಾತ್ಮಕ ಲೋಪಗಳಿರುವುದನ್ನು ನ್ಯಾಯಾಲಯ ಗಮನಿಸಿ, ಪ್ರಕರಣದ ನಡೆ ಸಾಂದರ್ಭಿಕವಾಗಿ ದೋಷಪೂರಿತವಾಗಿದೆ ಎಂದು ಅಭಿಪ್ರಾಯಪಟ್ಟಿತು. ಆದ್ದರಿಂದ ಗಾಂಧಿಯವರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವುದು ಸೂಕ್ತವೆಂದು ನಿರ್ಧರಿಸಿ ಪ್ರಕರಣ ರದ್ದುಗೊಳಿಸಿತು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

Copyright © All rights reserved. | Newsphere by AF themes.