ಎಸ್ಕಾಂ, ಕೆಪಿಟಿಸಿಎಲ್ ನಲ್ಲಿ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ :ಕೆಲಸ ಕಾಯಂ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ
ಸುಪ್ರೀಂಕೋರ್ಟ್: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ (ಎಸ್ಕಾಂ) ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರಿಗೆ ಸಿಹಿಸುದ್ದಿ ಸಿಕ್ಕಿದ್ದು ಕೆಲಸ ಕಾಯಂಗೊಳಿಸುವ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
‘ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ನೌಕರರು ವಂಚನೆಗೀಡಾಗಬಾರದು. ಅವರನ್ನು ಸರಕಾರಗಳು ಶೋಷಿಸಬಾರದು’ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹಾಗಾಗಿ, ರಾಜ್ಯ ಸರಕಾರವು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಸುಮಾರು 15-20 ವರ್ಷಗಳಿಂದ 13 ಸಾವಿರ ನೌಕರರನ್ನು ಕಾಯಂಗೊಳಿಸಲು ಚಿಂತನೆ ನಡೆಸಿದೆ. ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರನ್ನು ಕಾಯಂಗೊಳಿಸುವುದು ಅಥವಾ ಅವರನ್ನು ಒಳಗುತ್ತಿಗೆಗೆ ಸೇರಿಸಿಕೊಳ್ಳುವುದು ರಾಜ್ಯ ಸರಕಾರದ ಚಿಂತನೆಯಾಗಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರಕಾರವು ಗುತ್ತಿಗೆ ನೌಕರರ ಕಾಯಂಗೊಳಿಸುವ ಕುರಿತು ಅಧಿಕೃತ ಆದೇಶ ಹೊರಡಿಸಿದರೆ, ರಾಜ್ಯದ 13 ಸಾವಿರಕ್ಕೂ ಅಧಿಕ ನೌಕರರು ಹೆಚ್ಚಿನ ಸಂಬಳ ಸೇರಿ ವಿವಿಧ ಸೌಲಭ್ಯಗಳನ್ನು ಪಡೆಯಲಿದ್ದಾರೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
