07/03/2026

Law Guide Kannada

Online Guide

ಆತನಿಗೆ ಹೆಂಡತಿಯಲ್ಲ, ಬೇಕಾಗಿರುವುದು ಸೇವಕಿ: ಪತಿ ಸಲ್ಲಿಸಿದ ವಿಚ್ಚೇದನ ಅರ್ಜಿ ತಿರಸ್ಕರಿಸಿ ಹೈಕೋರ್ಟ್ ತರಾಟೆ

ಬೆಂಗಳೂರು: ಸಾಂಸಾರಿಕ ಜೀವನದಲ್ಲಿ ಕೋಪ, ಜಗಳ ಬರುವುದು ಸಹಜ, ಪತಿ ಮತ್ತು ಪತ್ನಿ ನಡುವೆ ಭಿನ್ನಾಭಿಪ್ರಾಯ ಮೂಡುವುದು ಸಾಮಾನ್ಯ. ಆದರೆ ಅದನ್ನು ಸುಧಾರಿಸಿಕೊಂಡು ಹೋಗುವುದು ಪ್ರತಿಯೊಬ್ಬ ದಂಪತಿಗಳ ಕರ್ತವ್ಯ,. ಆದರೆ ಇತ್ತೀಚಿನ ದಿನಗಳಲ್ಲಿ ದಂಪತಿಗಳು ಸಣ್ಣ ಸಣ್ಣ ಸಮಸ್ಯೆಗಳಿಗೆಯೇ ಜಗಳವಾಡಿ ವಿಚ್ಚೇದನಕ್ಕೆ ಮುಂದಾಗುವ ಪರಿಸ್ಥಿತಿ ಇದೆ. ಅಂತೆಯೇ ಇಲ್ಲೊಂದು ಅಂತಹದ್ದೇ ಘಟನೆ ನಡೆದಿದೆ.

ಅಮೆರಿಕಾಗೆ ಬರಲು ಒಲ್ಲೆ ಎಂದ ಪತ್ನಿಗೆ ಡೈವರ್ಸ್ ನೀಡಲು ಮುಂದಾದ ಪತಿಗೆ ಕರ್ನಾಟಕ ಹೈಕೋರ್ಟ್ ತರಾಟೆ ತೆಗೆದುಕೊಂಡಿದ್ದು ಆತನಿಗೆ ಹೆಂಡತಿಯಲ್ಲ, ಬೇಕಾಗಿರುವುದು ಸೇವಕಿ ಎಂದು ಕಿಡಿಕಾರಿದೆ. ಅಲ್ಲದೆ ಆತ ವಿಚ್ಛೇದನ ಕೋರಿ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.

ಇದು ದೊಡ್ಡ ಸಮಸ್ಯೆಯೇ ಅಲ್ಲ. ಈ ವಿಚಾರವನ್ನು ಇಬ್ಬರು ಮಾತುಕತೆ ಮೂಲಕ ಪರಿಹರಿಸಿಕೊಳ್ಳಬಹುದು. ಇನ್ನು ಈ ವಿಚ್ಛೇದನ ಕೇಳುತ್ತಿರುವ ವ್ಯಕ್ತಿಗೆ ಪತ್ನಿ ಅಲ್ಲ ಬೇಕಿರುವುದು ಪ್ರಾಮಾಣಿಕ ಸೇವಕಿ ಎಂದು ಕೋರ್ಟ್ ಕ್ಲಾಸ್ ತೆಗೆದುಕೊಂಡಿದೆ.

ಇನ್ನು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯವು 2020ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ, ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳಾದ ಜಯಂತ್ ಬ್ಯಾನರ್ಜಿ ಮತ್ತು ಉಮೇಶ್ ಅಡಿಗ ಅವರನ್ನೊಳಗೊಂಡ ವಿಭಾಗೀಯ ಪೀಠ ಹೀಗೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಇನ್ನು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯವು 2020ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ, ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಆ ತೀರ್ಪಿನಲ್ಲಿ, ಮಹಿಳೆಯು ತಾನು ಮತ್ತು ತನ್ನ ತಾಯಿ ಸಾಕಷ್ಟು ವರದಕ್ಷಿಣೆ ಅಥವಾ ಆಸ್ತಿಯನ್ನು ನೀಡದ ಕಾರಣ ನನ್ನ ಗಂಡ ಅತೃಪ್ತರಾಗಿದ್ದಾರೆ. ಆ ಕಾರಣಕ್ಕೆ ವಿಚ್ಛೇದನ ಕೇಳುತ್ತಿದ್ದಾರೆ ಎಂದು ಕೋರ್ಟ್ ಮುಂದೆ ಹೇಳಿದ್ದಾರೆ. ಈ ಬಗ್ಗೆ ಮನವರಿಕೆ ಮಾಡಿಕೊಂಡ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಮಹಿಳೆಯ ಪತಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಅರ್ಜಿಯ ಪ್ರಕಾರ ಈ ಇಬ್ಬರು ದಂಪತಿಗಳಿಗೆ 2015 ರಲ್ಲಿ ವಿವಾಹವಾಗಿತ್ತು. ಕೇವಲ 5 ದಿನಗಳು ಮಾತ್ರ ಇಬ್ಬರು ಸಂಸಾರ ಮಾಡಿದ್ದಾರೆ. ಇನ್ನು ಪತ್ನಿಗೆ ಸಿಂಗಾಪುರದಲ್ಲಿ ಕೆಲಸ, ಆಕೆ ತಾಯಿ ಜತೆಗೆ ವಾಸಿಸುತ್ತಿದ್ದರು. ಗಂಡ ಅಮೆರಿಕದಲ್ಲಿದ್ದ ಕಾರಣ, ಅಮೆರಿಕಕ್ಕೆ ಬರುವಂತೆ ಹಾಗೂ ಕೆಲಸವನ್ನು ಇಲ್ಲಿಗೆ ವರ್ಗಾವಣೆ ಮಾಡಿಕೊಳ್ಳುವಂತೆ ಹೇಳಿದ್ದಾರೆ. ಆದರೆ ಇದಕ್ಕೆ ಪತ್ನಿ ಒಪ್ಪಿಲ್ಲ, ಆ ಕಾರಣಕ್ಕೆ ನಾನು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

ತನ್ನ ಪತ್ನಿ ಅಮೆರಿಕಕ್ಕೆ ಬರದಿರಲು ಆಕೆಯ ತಾಯಿ ಕಾರಣ, ಅವರೇ ಅವಳನ್ನು ಇಲ್ಲಿಗೆ ಬರಲು ಬೀಡುತ್ತಿಲ್ಲ ಎಂದು ಪತಿ ಅರ್ಜಿಯಲ್ಲಿ ದೂರಿದ್ದಾರೆ. ಅಮೆರಿಕಕ್ಕೆ ಬರಲು ಅನುಕೂಲವಾಗುವಂತೆ ಯಾವುದೇ ವೀಸಾ ವ್ಯವಸ್ಥೆಗಳನ್ನು ಮಾಡಿಲ್ಲ, ಎಲ್ಲದಕ್ಕೂ ಅವಳ ತಾಯಿ ಅಡ್ಡ ಬರುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಆದರೆ ಹೈಕೋರ್ಟ್ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದು, ಆತನಿಗೆ ಹೆಂಡತಿಗಿಂತ ಸೇವಕಿ ಬೇಕಾಗಿದೆ. ಅವನು ತನ್ನ ಜೀವನ ಸಂಗಾತಿಯಿಂದ ತುಂಬಾ ನಿರೀಕ್ಷಿಸುತ್ತಿರುವಂತೆ ಕಾಣುತ್ತದೆ. ತಾನು ಹೇಳಿದಂತೆ ಕೇಳಬೇಕು, ತನ್ನ ಇಚ್ಛೆಯಂತೆ ವರ್ತಿಸಬೇಕು ಎಂಬ ಹಂಬಲ ಆತನಿಗಿದೆ ಎಂದು ಕೋರ್ಟ್ ಹೇಳಿದೆ. ಈ ಕ್ಷುಲ್ಲಕ ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸುವಂತೆ ಹೇಳಿದೆ.

ಈ ಹಿಂದೆ ಅಂದರೆ ಸೆಪ್ಟೆಂಬರ್ 15 ರಂದು ಇದೇ ಪೀಠ ಸಾರ್ವಜನಿಕವಾಗಿ ಒಂದು ವಿಷಯವನ್ನು ಪ್ರಸ್ತಾಪ ಮಾಡಿತ್ತು. ಮದುವೆ ಎಂಬುದು ಮಕ್ಕಳಾಟ ಅಲ್ಲ, ಕೇಳಿದಾಗ ನಿಮಗೆ ವಿಚ್ಛೇದನ ನೀಡಲು ಸಾಧ್ಯವಿಲ್ಲ. ಗಂಡ ಮತ್ತು ಹೆಂಡತಿ ಇಬ್ಬರೂ ಸಾಮಾನ್ಯ ವೈವಾಹಿಕ ಜೀವನವನ್ನು ನಡೆಸಲು ಪರಸ್ಪರ ರಾಜಿ ಮಾಡಿಕೊಳ್ಳಬೇಕು ಮತ್ತು ಹೊಂದಿಕೊಳ್ಳಬೇಕು ಎಂದು ಹೇಳಿತ್ತು. ಇದೀಗ ಈ ಪ್ರಕರಣದಲ್ಲೂ ಕೋರ್ಟ್ ಅದನ್ನೇ ಹೇಳಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.