Summon Lawyers Archives - Law Guide Kannada https://www.lawguidekannada.com/tag/summon-lawyers/ Online Guide Sat, 01 Nov 2025 07:25:09 +0000 en-US hourly 1 https://wordpress.org/?v=7.0 https://www.lawguidekannada.com/wp-content/uploads/2022/09/cropped-Logo_512-32x32.jpg Summon Lawyers Archives - Law Guide Kannada https://www.lawguidekannada.com/tag/summon-lawyers/ 32 32 ವಕೀಲರಿಗೆ ಸಮನ್ಸ್ ನೀಡಲು SP ಅನುಮೋದನೆ ಕಡ್ಡಾಯವೇ..? ಸುಪ್ರೀಂಕೋರ್ಟ್ ಕೊಟ್ಟ ತೀರ್ಪಿದು https://www.lawguidekannada.com/is-sp-approval-mandatory-to-summon-lawyers-supreme-courts-verdict/ Sat, 01 Nov 2025 07:25:09 +0000 http://www.lawguidekannada.com/?p=2659 ನವದೆಹಲಿ: ಕ್ರಿಮಿನಲ್ ಪ್ರಕರಣಗಳ ತನಿಖೆ ಸಂದರ್ಭದಲ್ಲಿ ತನಿಖಾಧಿಕಾರಿಗಳು (ಐಒಗಳು) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಅನುಮೋದನೆ ಇಲ್ಲದೇ ವಕೀಲರಿಗೆ ಸಮನ್ಸ್ ನೀಡುವಂತಿಲ್ಲ...

The post ವಕೀಲರಿಗೆ ಸಮನ್ಸ್ ನೀಡಲು SP ಅನುಮೋದನೆ ಕಡ್ಡಾಯವೇ..? ಸುಪ್ರೀಂಕೋರ್ಟ್ ಕೊಟ್ಟ ತೀರ್ಪಿದು appeared first on Law Guide Kannada.

]]>
ನವದೆಹಲಿ: ಕ್ರಿಮಿನಲ್ ಪ್ರಕರಣಗಳ ತನಿಖೆ ಸಂದರ್ಭದಲ್ಲಿ ತನಿಖಾಧಿಕಾರಿಗಳು (ಐಒಗಳು) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಅನುಮೋದನೆ ಇಲ್ಲದೇ ವಕೀಲರಿಗೆ ಸಮನ್ಸ್ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಪ್ರಕರಣವೊಂದರ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ), ಹಿರಿಯ ವಕೀಲರಾದ ಅರವಿಂದ ದಾತಾರ್ ಮತ್ತು ಪ್ರತಾಪ್ ವೇಣುಗೋಪಾಲ್ ಅವರಿಗೆ ನೀಡಿದ್ದ ಸಮನ್ಸ್ ಗಳನ್ನು ರದ್ದುಪಡಿಸಿ ತೀರ್ಪು ನೀಡಿದ ವೇಳೆ ಸುಪ್ರೀಂ ಕೋರ್ಟ್ ಈ ನಿರ್ದೇಶನ ನೀಡಿದೆ. ಹಣ ಅಕ್ರಮ ವರ್ಗಾವಣೆ ಕುರಿತು ನಡೆಸುತ್ತಿರುವ ತನಿಖೆ ಭಾಗವಾಗಿ ಜಾರಿ ನಿರ್ದೆಶನಾಲಯವು ದಾತಾರ್ ಹಾಗೂ ಪ್ರತಾಪ್ ವೇಣುಗೋಪಾಲ್ ಅವರಿಗೆ ಸಮನ್ಸ್ ನೀಡಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು.

ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ. ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರನ್ ಹಾಗೂ ಎನ್.ವಿ.ಅಂಜಾರಿಯಾ ಅವರು ಇದ್ದ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಿತ್ತು. ಆಗಸ್ಟ್ 12ರಂದು ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಪೀಠ ಪ್ರಕಟಿಸಿದ್ದು, ತನಿಖಾಧಿಕಾರಿಗಳು (ಐಒಗಳು) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಅನುಮೋದನೆ ಇಲ್ಲದೇ ವಕೀಲರಿಗೆ ಸಮನ್ಸ್ ನೀಡಬಾರದು ಎಂದು ಸೂಚಿಸಿದೆ. ತನ್ನ ಕಕ್ಷಿದಾರರಿಗೆ ಕಾನೂನು ಸಲಹೆ ನೀಡುವ ವಕೀಲರಿಗೆ ತನಿಖಾ ಸಂಸ್ಥೆಗಳು ಮನಸ್ಸಿಗೆ ತೋಚಿದಂತೆ ಸಮನ್ಸ್ ನೀಡುವುದಕ್ಕೆ ಕಡಿವಾಣ ಹಾಕುವುದಕ್ಕಾಗಿ ಸುಪ್ರೀಂ ಕೋರ್ಟ್ ನ್ಯಾಯಪೀಠ, ಹಲವು ನಿರ್ದೇಶನಗಳನ್ನೂ ನೀಡಿದೆ.

ದಾತಾರ್ ಹಾಗೂ ಪ್ರತಾಪ್ ಅವರಿಗೆ ಸಮನ್ಸ್ ನೀಡಿದ ಇ.ಡಿ ಕ್ರಮಕ್ಕೆ ಸುಪ್ರೀಂ ಕೋರ್ಟ್ ವಕೀಲರ ಸಂಘ (ಎಸ್ಸಿಬಿಎ) ಹಾಗೂ ಸುಪ್ರೀಂ ಕೋರ್ಟ್ನಲ್ಲಿ ವಕಾಲತ್ತು ವಹಿಸುವ ವಕೀಲರ ಸಂಘದಿಂದ (ಎಸ್ಸಿಎಒಆರ್ಎ) ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಇದು ವಿವಾದದ ಸ್ವರೂಪ ಪಡೆದ ನಂತರ, ತನ್ನ ಅಧಿಕಾರಿಗಳಿಗೆ ಕೆಲ ನಿರ್ದೇಶನಗಳನ್ನು ನೀಡಿ ಜಾರಿ ನಿರ್ದೇಶನಾಲಯ ಜೂನ್ 20ರಂದು ಸುತ್ತೋಲೆ ಹೊರಡಿಸಿತ್ತು. ಇ.ಡಿ ನಿರ್ದೇಶಕರಿಂದ ಪೂರ್ವಾನುಮತಿ ಮತ್ತು ಬಿಎಸ್ಎ ಸೆಕ್ಷನ್ 132ಕ್ಕೆ ಅನುಗುಣವಾಗಿ ಇಲ್ಲದ ಹೊರತು, ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ವಕೀಲರಿಗೆ ಸಮನ್ಸ್ ನೀಡದಂತೆ ತನ್ನ ಅಧಿಕಾರಿಗಳಿಗೆ ಸೂಚಿಸಿತ್ತು.

‘ಸುಪ್ರೀಂ ಕೋರ್ಟ್ ತೀರ್ಪಿನ ಅಂಶಗಳು ಈ ಕೆಳಕಂಡಂತಿದೆ.
ಕ್ರಿಮಿನಲ್ ಪ್ರಕರಣಗಳ ತನಿಖಾಧಿಕಾರಿಗಳು ಗಂಭೀರ ಪ್ರಕರಣದ ತನಿಖೆ ಭಾಗವಾಗಿ ಪ್ರಾಥಮಿಕ ವಿಚಾರಣೆ ನಡೆಸುವ ಠಾಣಾಧಿಕಾರಿಗಳು ಆರೋಪಿ ಪರ ಹಾಜರಾಗುವ ವಕೀಲರಿಗೆ ಸಮನ್ಸ್ ನೀಡುವಂತಿಲ್ಲ. ಬಿಎಸ್ಎ ಸೆಕ್ಷನ್ 132ರ ಅಡಿ ವಿನಾಯಿತಿ ನೀಡಲಾಗಿರುವ ಪ್ರಕರಣಗಳಿಗೆ ಇದು ಅನ್ವಯಿಸುವುದಿಲ್ಲ.

ವಿನಾಯಿತಿ ನೀಡಲಾಗಿದ್ದರೂ ಸಮನ್ಸ್ ನೀಡಬೇಕಾದ ಅಗತ್ಯ ಕಂಡುಬಂದಲ್ಲಿ ಅದಕ್ಕೆ ಕಾರಣಗಳನ್ನು ನೀಡಬೇಕು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಿಂತ ಕಡಿಮೆ ಶ್ರೇಣಿಯಲ್ಲದ ಮೇಲಧಿಕಾರಿಯಿಂದ ಅನುಮತಿ ಪಡೆಯಬೇಕು

ವಕೀಲರಿಗೆ ಸಮನ್ಸ್ಗಳನ್ನು ನೀಡಿದ್ದಲ್ಲಿ ವಕೀಲರು ಅಥವಾ ಕಕ್ಷಿದಾರರು ಈ ಕುರಿತು ಮನವಿ ಸಲ್ಲಿಸಿದ್ದಲ್ಲಿ ಅವುಗಳು ನ್ಯಾಯಿಕ ಪರಾಮರ್ಶೆಗೆ ಒಳಪಡಲಿವೆ. ಕಕ್ಷಿದಾರರಿಗೆ ಸಂಬಂಧಿಸಿದ ದಾಖಲೆಗಳು ತಮ್ಮ ಬಳಿ ಇದ್ದಲ್ಲಿ ಅವುಗಳನ್ನು ವಕೀಲರು ಹಾಜರುಪಡಿಸಬೇಕು. ಇದು ಬಿಎಸ್ಎ ಸೆಕ್ಷನ್ 132ರಡಿ ಒದಗಿಸಲಾಗಿರುವ ಹಕ್ಕಿನ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ದಾಖಲೆಗಳನ್ನು ಹಾಜರುಪಡಿಸುವುದಿಲ್ಲ ಎಂದು ಹೇಳುವಂತಿಲ್ಲ.

ವಕೀಲರು ಹಾಗೂ ಕಕ್ಷಿದಾರರ ನಡುವಿನ ಸಂವಹನ ಗೌಪ್ಯವಾಗಿಡಬೇಕು. ಇದು ಕಕ್ಷಿದಾರರಿಗೆ ಭಾರತೀಯ ಸಾಕ್ಷ್ಯ ಅಧಿನಿಯಮ(ಬಿಎಸ್ಎ) ಸೆಕ್ಷನ್ 132ರಡಿ ನೀಡಲಾಗಿರುವ ಹಕ್ಕು ದಾಖಲೆಗಳನ್ನು ಹಾಜರುಪಡಿಸುವ ಕುರಿತ ಆದೇಶಕ್ಕೆ ಸಂಬಂಧಿಸಿ ಸಲ್ಲಿಕೆಯಾಗುವ ಆಕ್ಷೇಪಣೆಗಳು ಹಾಗೂ ದಾಖಲೆಗಳು ವಿಚಾರಣೆಗೆ ಪರಿಗಣಿಸುವುದಕ್ಕೆ ಯೋಗ್ಯವಾಗಿಯೇ ಎಂಬುದರ ಕುರಿತು ಎರಡೂ ಕಡೆಯವರ ವಾದಗಳನ್ನು ಆಲಿಸಿದ ಬಳಿಕ ಸಂಬಂಧಪಟ್ಟ ನ್ಯಾಯಾಲಯ ನಿರ್ಧಾರ ಕೈಗೊಳ್ಳುವುದು

ಡಿಜಿಟಲ್ ಸಾಧನಗಳನ್ನು ಹಾಜರುಪಡಿಸುವಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ಸೆಕ್ಷನ್ 94ರ ಪ್ರಕಾರ ತನಿಖಾಧಿಕಾರಿ ನಿರ್ದೇಶನ ನೀಡಿದ್ದಲ್ಲಿ ಅಂತಹ ಡಿಜಿಟಲ್ ಸಾಧನಗಳನ್ನು ವ್ಯಾಪ್ತಿಹೊಂದಿದ ನ್ಯಾಯಾಲಯಕ್ಕೆ ಮಾತ್ರ ಸಲ್ಲಿಸಬೇಕು. ಯಾವುದೇ ಕಂಪನಿ ಸಂಸ್ಥೆಗೆ ಕಾನೂನು ಸಲಹೆ ನೀಡುವುದಕ್ಕಾಗಿ ನೇಮಕವಾಗಿರುವ ವಕೀಲರು ಬಿಎಸ್ಎ ಸೆಕ್ಷನ್ 132ರಡಿ ರಕ್ಷಣೆಗೆ ಅರ್ಹರಲ್ಲ. ಕಕ್ಷಿದಾರರ ಸಮ್ಮತಿ ಇರದ ಹೊರತು ಯಾವುದೇ ವಕೀಲ ತನ್ನ ಕಕ್ಷಿದಾರರನೊಂದಿಗೆ ನಡೆಸಿದ ಸಂವಹನ ವಿವರಗಳನ್ನು/ದಾಖಲೆಗಳ ಸ್ಥಿತಿಗತಿ/ವಿಷಯವಸ್ತು/ನೀಡಿದ ಕಾನೂನು ಸಲಹೆಗಳನ್ನು ಬಹಿರಂಗಪಡಿಸುವಂತಿಲ್ಲ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

The post ವಕೀಲರಿಗೆ ಸಮನ್ಸ್ ನೀಡಲು SP ಅನುಮೋದನೆ ಕಡ್ಡಾಯವೇ..? ಸುಪ್ರೀಂಕೋರ್ಟ್ ಕೊಟ್ಟ ತೀರ್ಪಿದು appeared first on Law Guide Kannada.

]]>
ಕಾನೂನು ಸಲಹೆ ನೀಡುವ ವಕೀಲರಿಗೆ ಸಮನ್ಸ್ ಜಾರಿ ಸರಿಯೋ..? ತಪ್ಪೋ..? ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪಿದು… https://www.lawguidekannada.com/is-it-right-to-summon-lawyers-who-give-legal-advice-wrong/ Wed, 30 Jul 2025 12:57:16 +0000 http://www.lawguidekannada.com/?p=2124 ನವದೆಹಲಿ: ಕಕ್ಷಿಗಾರನಿಗೆ ಕೇವಲ ಕಾನೂನು ಸಲಹೆ ನೀಡಿದ್ದಕ್ಕಾಗಿ ವಕೀಲರಿಗೆ ಸಮನ್ಸ್ ನೀಡುವಂತಿಲ್ಲ. ವಿಚಾರಣೆಗೆ ಕರೆಯುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ....

The post ಕಾನೂನು ಸಲಹೆ ನೀಡುವ ವಕೀಲರಿಗೆ ಸಮನ್ಸ್ ಜಾರಿ ಸರಿಯೋ..? ತಪ್ಪೋ..? ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪಿದು… appeared first on Law Guide Kannada.

]]>
ನವದೆಹಲಿ: ಕಕ್ಷಿಗಾರನಿಗೆ ಕೇವಲ ಕಾನೂನು ಸಲಹೆ ನೀಡಿದ್ದಕ್ಕಾಗಿ ವಕೀಲರಿಗೆ ಸಮನ್ಸ್ ನೀಡುವಂತಿಲ್ಲ. ವಿಚಾರಣೆಗೆ ಕರೆಯುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ತನಿಖೆಗಳ ಸಮಯದಲ್ಲಿ ಕಕ್ಷಿಗಾರರಿಗೆ ಕಾನೂನು ಸಲಹೆಯನ್ನು ನೀಡಿರುವುದಕ್ಕಾಗಿ ಅಥವಾ ಅವರನ್ನು ಪ್ರತಿನಿಧಿಸಿರುವುದಕ್ಕಾಗಿ ವಕೀಲರನ್ನು ತನಿಖಾ ಸಂಸ್ಥೆಗಳು ವಿಚಾರಣೆಗೆ ಕರೆಯುವುದಕ್ಕೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಬಿ.ಆರ್. ಗವಾಯಿ ಮತ್ತು ನ್ಯಾಯಾಧೀಶ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠ ಈ ತೀರ್ಪು ನೀಡಿದೆ.

ಈ ವಿಚಾರದಲ್ಲಿ, ವಕೀಲರ ಸಂಘಗಳಾದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ ಮತ್ತು ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್ ಆನ್ ರೆಕಾರ್ಡ್ ಅಸೋಸಿಯೇಶನ್ ನ ಪ್ರತಿನಿಧಿಗಳ ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ ಅನ್ನು ಪ್ರತಿನಿಧಿಸಿದ ಅದರ ಅಧ್ಯಕ್ಷರೂ ಆಗಿರುವ ವಿಕಾಸ್ ಸಿಂಗ್, ಕಾನೂನು ವೃತ್ತಿಯ ಮೇಲೆ ”ಸ್ವೇಚ್ಛಾಚಾರದ ಸಮನ್ಸ್” ಬೀರಬಹುದಾದ ಆತಂಕಕಾರಿ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಓರ್ವ ವ್ಯಕ್ತಿಯು ಕೇವಲ ವಕೀಲನ ಕೆಲಸವನ್ನು ಮಾಡುತ್ತಿದ್ದರೆ, ತನಿಖೆ ಎದುರಿಸುತ್ತಿರುವ ತನ್ನ ಕಕ್ಷಿಗಾರನಿಗೆ ಕಾನೂನು ಅಭಿಪ್ರಾಯ ನೀಡಿರುವುದಕ್ಕಾಗಿ ಅವರನ್ನು ತನಿಖಾ ಸಂಸ್ಥೆಗಳು ವಿಚಾರಣೆಗೆ ಕರೆಯುವಂತಿಲ್ಲ. ಹಾಗೆಯೇ ಯಾವುದೇ ವಕೀಲರು ”ಅಪರಾಧದಲ್ಲಿ ತನ್ನ ಕಕ್ಷಿಗಾರನಿಗೆ ನೆರವು ನೀಡುತ್ತಿದ್ದರೆ”, ಆಗ ಅವರನ್ನು ವಿಚಾರಣೆಗೆ ಕರೆಯಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಯಾವುದೇ ವಕೀಲರು ಅಪರಾಧದಲ್ಲಿ ತಮ್ಮ ಕಕ್ಷಿಗಾರರಿಗೆ ಸಹಾಯ ಮಾಡುತ್ತಿದ್ದರೆ ಅವರನ್ನು ವಿಚಾರಣೆಗೆ ಕರೆಯಬಹುದು ಎನ್ನುವುದನ್ನು ನಾವು ಮೊದಲೇ ಹೇಳಿದ್ದೇವೆ. ಆದರೆ, ಕೇವಲ ಕಾನೂನು ಸಲಹೆ ನೀಡಿರುವುದಕ್ಕಾಗಿ ಅವರನ್ನು ವಿಚಾರಣೆಗೆ ಕರೆಯುವಂತಿಲ್ಲ” ಎಂದು ನ್ಯಾಯಾಲಯ ಹೇಳಿತು.

ಕೇವಲ ಕಾನೂನು ಸಲಹೆ ನೀಡಿರುವುದಕ್ಕಾಗಿ ವಕೀಲರನ್ನು ವಿಚಾರಣೆಗೆ ಕರೆಯಬಾರದು ಎನ್ನುವುದಕ್ಕೆ ಅನುಷ್ಠಾನ ನಿರ್ದೇಶನಾಲಯವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸಹಮತ ವ್ಯಕ್ತಪಡಿಸಿದರು. ಇನ್ನು ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಲಾಗಿದ್ದು, ಪ್ರಕರಣಗಳಿಗೆ ಸಂಬಂಧಿಸಿ ತನ್ನೆದುರು ವಿಚಾರಣೆಗೆ ಹಾಜರಾಗುವಂತೆ ಇತ್ತೀಚೆಗೆ ಜಾರಿ ನಿರ್ದೇಶನಾಲಯವು ಕೆಲವು ವಕೀಲರಿಗೆ ಸಮನ್ಸ್ ಜಾರಿ ಮಾಡಿತ್ತು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

The post ಕಾನೂನು ಸಲಹೆ ನೀಡುವ ವಕೀಲರಿಗೆ ಸಮನ್ಸ್ ಜಾರಿ ಸರಿಯೋ..? ತಪ್ಪೋ..? ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪಿದು… appeared first on Law Guide Kannada.

]]>