writ petitions Archives - Law Guide Kannada https://www.lawguidekannada.com/tag/writ-petitions/ Online Guide Sun, 16 Nov 2025 16:14:59 +0000 en-US hourly 1 https://wordpress.org/?v=7.0.2 https://www.lawguidekannada.com/wp-content/uploads/2022/09/cropped-Logo_512-32x32.jpg writ petitions Archives - Law Guide Kannada https://www.lawguidekannada.com/tag/writ-petitions/ 32 32 ಟ್ರಿಬ್ಯೂನಲ್ ವ್ಯಾಪ್ತಿಯ ವಿಷಯಗಳಲ್ಲಿ ಹೈಕೋರ್ಟ್ ರಿಟ್ ಅರ್ಜಿ ಸ್ವೀಕರಿಸಬಾರದು – ಫರ್ಮಾನು ಹೊರಡಿಸಿದ ಸುಪ್ರೀಂ https://www.lawguidekannada.com/high-court-should-not-entertain-writ-petitions-in-matters-falling-within-the-jurisdiction-of-tribunals-supreme-court-issues-decree/ Sun, 16 Nov 2025 16:14:59 +0000 https://www.lawguidekannada.com/?p=2760 ನವದೆಹಲಿ: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ವಿವಾದ ಸಂಬಂಧ ನ್ಯಾಯ ಮಂಡಳಿಗಳ ವ್ಯಾಪ್ತಿಗೆ ಬರುವ ವಿಷಯಗಳಲ್ಲಿ ಹೈಕೋರ್ಟ್ ರಿಟ್ ಅರ್ಜಿಯನ್ನು...

The post ಟ್ರಿಬ್ಯೂನಲ್ ವ್ಯಾಪ್ತಿಯ ವಿಷಯಗಳಲ್ಲಿ ಹೈಕೋರ್ಟ್ ರಿಟ್ ಅರ್ಜಿ ಸ್ವೀಕರಿಸಬಾರದು – ಫರ್ಮಾನು ಹೊರಡಿಸಿದ ಸುಪ್ರೀಂ appeared first on Law Guide Kannada.

]]>
ನವದೆಹಲಿ: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ವಿವಾದ ಸಂಬಂಧ ನ್ಯಾಯ ಮಂಡಳಿಗಳ ವ್ಯಾಪ್ತಿಗೆ ಬರುವ ವಿಷಯಗಳಲ್ಲಿ ಹೈಕೋರ್ಟ್ ರಿಟ್ ಅರ್ಜಿಯನ್ನು ಸ್ವೀಕರಿಸಬಾರದು ಎಂದು ಸುಪ್ರೀಂ ಕೋರ್ಟ್ ಫರ್ಮಾನು ಹೊರಡಿಸಿದೆ.

“ಲೀಲಾವತಿ ಎನ್. ಮತ್ತಿತರರು ವಿರುದ್ಧ ಕರ್ನಾಟಕ ರಾಜ್ಯ ಮತ್ತಿತರರು” ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಮತ್ತು ನ್ಯಾಯಮೂರ್ತಿ ವಿಜಯ್ ಬಿಡೋಯ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಮಹತ್ವದ ತೀರ್ಪು ನೀಡಿದೆ.

ಪರಿಣಾಮಕಾರಿ ಪರ್ಯಾಯ ಪರಿಹಾರ ಲಭ್ಯವಿರುವಾಗ ನ್ಯಾಯಮಂಡಳಿಗಳ ವ್ಯಾಪ್ತಿಗೆ ಬರುವ ವಿಷಯಗಳಲ್ಲಿ ಭಾರತದ ಸಂವಿಧಾನದ 226 ನೇ ವಿಧಿಯ ಅಡಿಯಲ್ಲಿ ಹೈಕೋರ್ಟ್ ರಿಟ್ ಅರ್ಜಿಯನ್ನು ಸ್ವೀಕರಿಸಬಾರದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಕರ್ನಾಟಕ ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಸಿವಿಲ್ ಮೇಲ್ಮನವಿ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಪೀಠವು, ನೇಮಕಾತಿ ಪ್ರಕ್ರಿಯೆಯಿಂದ ಉಂಟಾಗುವ ಸೇವಾ ಸಂಬಂಧಿತ ವಿವಾದಗಳಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯೇ ಸೂಕ್ತ ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟು ಕರ್ನಾಟಕ ಹೈಕೋರ್ಟಿನ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ರದ್ದುಗೊಳಿಸಿತು.

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆ.ಎಸ್.ಎ.ಟಿ.) ತನ್ನ ಮುಂದೆ ಮಂಡಿಸಲಾದ ವಿಷಯವನ್ನು ಪರಿಣಾಮಕಾರಿಯಾಗಿ ಮತ್ತು ಸಮಗ್ರವಾಗಿ ನಿಭಾಯಿಸಲು ಮತ್ತು ಅದಕ್ಕೆ ಸಂಪೂರ್ಣ ನ್ಯಾಯ ಒದಗಿಸಲು ಎಲ್ಲಾ ಅಧಿಕಾರಗಳನ್ನು ಹೊಂದಿದೆ ಎಂದು ಪೀಠ ಹೇಳಿದೆ.

ಹಿರಿಯ ವಕೀಲ ವೇಣುಗೋಪಾಲ ಗೌಡ ಅವರು ಮೇಲ್ಮನವಿದಾರರ ಪರವಾಗಿ ಪ್ರತಿನಿಧಿಸಿದರೆ, ಹಿರಿಯ ವಕೀಲರಾದ ದೇವದತ್ತ ಕಾಮತ್, ಗೀತಾ ಲೂತ್ರಾ ಮತ್ತು ಎಎಜಿ ನಿಶಾಂತ್ ಪಾಟೀಲ್ ಅವರು ಪ್ರತಿವಾದಿಗಳ ಪರವಾಗಿ ಪ್ರತಿನಿಧಿಸಿದರು.

ಪರಿಣಾಮಕಾರಿ ಪರ್ಯಾಯ ಪರಿಹಾರ ಲಭ್ಯವಿರುವಲ್ಲಿ, ನ್ಯಾಯಮಂಡಳಿಗಳ ವ್ಯಾಪ್ತಿಗೆ ಬರುವ ವಿಷಯಗಳಲ್ಲಿ ಹೈಕೋರ್ಟ್ ಭಾರತದ ಸಂವಿಧಾನದ 226 ನೇ ವಿಧಿಯ ಅಡಿಯಲ್ಲಿ ರಿಟ್ ಅರ್ಜಿಯನ್ನು ಸ್ವೀಕರಿಸಬಾರದು. ಅದೇನೇ ಇದ್ದರೂ, ಸಂವಿಧಾನದ ಭಾಗ ॥ ರ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳ ಜಾರಿ; ಶಾಸನಬದ್ಧ ಪ್ರಾಧಿಕಾರದಿಂದ ಅತಿರೇಕದ ಅಥವಾ ಕಾನೂನುಬಾಹಿರ ಅಧಿಕಾರದ ಬಳಕೆ; ನೈಸರ್ಗಿಕ ನ್ಯಾಯದ ತತ್ತ್ವಗಳ ಉಲ್ಲಂಘನೆ; ಮೂಲ ಕಾನೂನಿನ ಅಧಿಕಾರ ವ್ಯಾಪ್ತಿ ಸ್ವತಃ ಸವಾಲಿನಲ್ಲಿದ್ದರೆ ಸೇರಿದಂತೆ ಅಸಾಧಾರಣ ಸಂದರ್ಭಗಳಲ್ಲಿ ಅಂತಹ ಪರ್ಯಾಯ ಪರಿಹಾರದ ಅಸ್ತಿತ್ವದ ಹೊರತಾಗಿಯೂ, ಆರ್ಟಿಕಲ್ 226 ರ ಅಡಿಯಲ್ಲಿ ರಿಟ್ ಅರ್ಜಿಯನ್ನು ನಿರ್ವಹಿಸಬಹುದಾಗಿದೆ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ಸ್ಪಷ್ಟಪಡಿಸಿತು.

ಏನಿದು ವಿವಾದ..?
ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ರಲ್ಲಿ ಅಧಿಸೂಚನೆಯನ್ನು ಹೊರಡಿಸಿ 6-8 ನೇ ತರಗತಿಗಳ ಒಟ್ಟು 15,000 ಪದವಿ ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿತು. ಮೇಲ್ಮನವಿದಾರರು ಮತ್ತು ಖಾಸಗಿ ಪ್ರತಿವಾದಿಗಳು ಅರ್ಜಿ ಸಲ್ಲಿಸಿ ಸದರಿ ಪರೀಕ್ಷೆಗಳಲ್ಲಿ ಭಾಗವಹಿಸಿದರು. ನಂತರ, ಫಲಿತಾಂಶಗಳನ್ನು ಘೋಷಿಸಲಾಯಿತು ಮತ್ತು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆದರೆ ಸದರಿ ಪಟ್ಟಿಯಲ್ಲಿ ಇತರ ಹಿಂದುಳಿದ ವರ್ಗ (ಒಬಿಸಿ) ವಿಭಾಗದಲ್ಲಿ ಅರ್ಜಿ ಸಲ್ಲಿಸಿದ ಕೆಲವು ವಿವಾಹಿತ ವ್ಯಕ್ತಿಗಳು/ಅಭ್ಯರ್ಥಿಗಳ ಹೆಸರುಗಳು ಇರಲಿಲ್ಲ. ಏಕೆಂದರೆ ಅವರು ತಮ್ಮ ಗಂಡಂದಿರ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ತೋರಿಸದೆ, ತಮ್ಮ ತಂದೆಯ ಹೆಸರಿನಲ್ಲಿ ನೀಡಲಾದ ಪ್ರಮಾಣಪತ್ರವನ್ನು ಸಲ್ಲಿಸಿದ್ದರು. ಅವರು ಸಲ್ಲಿಸಿದ ಪ್ರಮಾಣಪತ್ರವನ್ನು ಪರಿಗಣಿಸದ ಪರಿಣಾಮವಾಗಿ, ಈ ವ್ಯಕ್ತಿಗಳು ಹಿಂದುಳಿದ (ಒಬಿಸಿ) ವರ್ಗಕ್ಕೆ ನೀಡಲಾದ ಮೀಸಲಾತಿಗೆ ಅನರ್ಹರು ಎಂದು ಕಂಡುಬಂದಿದೆ. ಆದ್ದರಿಂದ, ಅವರ ಹೆಸರುಗಳು ಸಾಮಾನ್ಯ ಅರ್ಹತೆಯ ಪಟ್ಟಿಯಲ್ಲಿ ಪ್ರತಿಬಿಂಬಿತವಾಗಿವೆ.

ಇದರಿಂದ ಅಸಮಾಧಾನಗೊಂಡ ಖಾಸಗಿ ಪ್ರತಿವಾದಿಗಳು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಲು ಮತ್ತು ಪಟ್ಟಿಯಲ್ಲಿರುವ ಹೆಸರುಗಳನ್ನು ಪರಿಗಣಿಸಲು ಕೋರಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದರು.

ಹೈಕೋರ್ಟ್ ಆಡಳಿತ ನ್ಯಾಯಮಂಡಳಿಯನ್ನು ಸಂಪರ್ಕಿಸಲು ಸ್ವಾತಂತ್ರವನ್ನು ನೀಡಿತು. ಆದ್ದರಿಂದ, ಕೆಲವು ವ್ಯಕ್ತಿಗಳು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ (ಕೆ.ಎಸ್.ಎ.ಟಿ.) ಅನ್ನು ಸಂಪರ್ಕಿಸಿದರು.

ಕಲಬುರಗಿ ಪೀಠವು ಆದೇಶ ಹೊರಡಿಸಿದ ಹೊರತಾಗಿಯೂ ಏಕ ನ್ಯಾಯಾಧೀಶರು ರಿಟ್ ಅರ್ಜಿಗಳನ್ನು ಪುರಸ್ಕರಿಸಿ ಅದನ್ನು ಅನುಮತಿಸಿದರು. ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಹ ರದ್ದು ಗೊಳಿಸಲಾಯಿತು. ನಂತರ ಸರ್ಕಾರ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿತು. ಪಟ್ಟಿಯಲ್ಲಿ ತಮ್ಮ ಹೆಸರಿಲ್ಲವಾದ್ದರಿಂದ ಪ್ರತಿವಾದಿಗಳು ಮತ್ತೆ ಹೈಕೋರ್ಟಿಗೆ ಮೊರೆ ಹೋದರು. ಹೈಕೋರ್ಟ್ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ (ಕೆ.ಎಸ್.ಎ.ಟಿ.) ಅನ್ನು ಸಂಪರ್ಕಿಸಲು ಸ್ವಾತಂತ್ರ್ಯವನ್ನು ನೀಡಿತು.

ಮೇಲ್ಮನವಿದಾರರು ಸರ್ಕಾರದ ಮುಂದೆ ಸಲ್ಲಿಸಿದ ಆಕ್ಷೇಪಣೆಗಳನ್ನು ತಿರಸ್ಕರಿಸಲಾಯಿತು ಹಾಗೂ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಯಿತು. ತಮ್ಮ ಹೆಸರುಗಳು ಅದರಲ್ಲಿ ಕಂಡುಬರದ ಕಾರಣ, ಮೇಲ್ಮನವಿದಾರರು ರಿಟ್ ಮೇಲ್ಮನವಿಗಳನ್ನು ಸಲ್ಲಿಸಿದರು ಮತ್ತು ವಿಭಾಗೀಯ ಪೀಠವು ಏಕ ನ್ಯಾಯಾಧೀಶರ ಆದೇಶವನ್ನು ರದ್ದುಗೊಳಿಸಿತು. ಆದಾಗ್ಯೂ, ಅಂತಿಮ ಆಯ್ಕೆ ಪಟ್ಟಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಂದ ಶಿಕ್ಷಕರ ನೇಮಕಾತಿಯನ್ನು ಮುಂದುವರಿಸಲು ರಾಜ್ಯಕ್ಕೆ ನಿರ್ದೇಶನ ನೀಡಿತು. ಈ ಆದೇಶವನ್ನು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

The post ಟ್ರಿಬ್ಯೂನಲ್ ವ್ಯಾಪ್ತಿಯ ವಿಷಯಗಳಲ್ಲಿ ಹೈಕೋರ್ಟ್ ರಿಟ್ ಅರ್ಜಿ ಸ್ವೀಕರಿಸಬಾರದು – ಫರ್ಮಾನು ಹೊರಡಿಸಿದ ಸುಪ್ರೀಂ appeared first on Law Guide Kannada.

]]>
10 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ನೌಕರರು ಖಾಯಂಗೆ ಅರ್ಹರು- ಹೈಕೋರ್ಟ್ ಮಹತ್ವದ ತೀರ್ಪು https://www.lawguidekannada.com/the-high-court-has-given-an-important-verdict-that-employees-who-have-served-for-more-than-10-years-are-eligible-for-permanent/ Wed, 21 Aug 2024 14:05:19 +0000 https://www.lawguidekannada.com/?p=647 ಬೆಂಗಳೂರು: 10 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ನೌಕರರು ಖಾಯಂಗೆ ಅರ್ಹರು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ....

The post 10 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ನೌಕರರು ಖಾಯಂಗೆ ಅರ್ಹರು- ಹೈಕೋರ್ಟ್ ಮಹತ್ವದ ತೀರ್ಪು appeared first on Law Guide Kannada.

]]>
ಬೆಂಗಳೂರು: 10 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ನೌಕರರು ಖಾಯಂಗೆ ಅರ್ಹರು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಹತ್ತು ವರ್ಷಕ್ಕೂ ಅಧಿಕ ಸಮಯದಿಂದ ಕೆಲಸ ಮಾಡುತ್ತಿದ್ದ ನೌಕರರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ ಎಂಬ ಸರ್ಕಾರದ ಹಿಂಬರಹವನ್ನು ರದ್ದುಪಡಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ಬಿ.ಎಂ ಶ್ಯಾಮ್ ಪ್ರಸಾದ್ ಅವರಿದ್ದ ಪೀಠವು, ಈ ನೌಕರರು ಖಾಯಂಮಾತಿಗೆ ಅರ್ಹರಾಗಿದ್ದು, ಮೂರು ತಿಂಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿತು.

ಸೇವೆ ಖಾಯಂಗೊಳಿಸಲು ನಿರಾಕರಿಸಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ನೀಡಿದ್ದ ಹಿಂಬರವನ್ನು ಪ್ರಶ್ನಿಸಿ ಮೈಸೂರಿನ ಶಾಂತಲಕ್ಷ್ಮಿ ಹಾಗೂ ಇತರರು ಹೈಕೋರ್ಟ್ ಗೆ ಪ್ರತ್ಯೇಕವಾಗಿ ರಿಟ್ ಅರ್ಜಿಗಳನ್ನು ಸಲ್ಲಿಸಿದ್ದರು. ಈ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ ಶ್ಯಾಮ್ ಪ್ರಸಾದ್ ಅವರಿದ್ದ ಪೀಠವು, ಒಂದೇ ಬಗೆಯ ಉದ್ಯೋಗ ಮಾಡುವವರನ್ನು ಭಿನ್ನ ರೀತಿಯಲ್ಲಿ ನೋಡಲಾಗದು. ಅರ್ಜಿದಾರರು 10 ವರ್ಷಗಳಿಗೂ ಅಧಿಕ ಕಾಲ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದ್ದಾರೆ. ಅವರನ್ನು ಹಂಗಾಮಿ ನೌಕರರಾಗಿಯೇ ಮುಂದುವರಿಸಲಾಗದು. ಅವರಿಗೆ ಅರ್ಹ ವೇತನ/ ಭತ್ಯೆಗಳನ್ನು ನೀಡಬೇಕಾಗುತ್ತದೆ. ಹಾಗಾಗಿ, ಉಮಾದೇವಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಅನುಸಾರ ಇವರು ಸೇವೆ ಖಾಯಂಗೆ ಅರ್ಹರು” ಎಂದು ತಿಳಿಸಿದೆ.
ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದ ಅರ್ಜಿದಾರರನ್ನು ಖಾಯಂಗೊಳಿಸಲು ನಿರಾಕರಿಸಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಹಿಂಬರಹನೀಡಿದ್ದವು. ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದ ಸರ್ಕಾರ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಅರ್ಜಿದಾರರನ್ನು ಮಂಜೂರಾದ ಹುದ್ದೆಗಳಿಗೆ ನೇಮಕ ಮಾಡಿಕೊಂಡಿರಲಿಲ್ಲ. ಬದಲಿಗೆ ಅವರನ್ನು ಮಂಜೂರಾಗದ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿತ್ತು. ನ್ಯಾಯಾಲಯಗಳ ಅದೇಶದಿಂದಾಗಿ ಅರ್ಜಿದಾರರನ್ನು 10 ವರ್ಷಕ್ಕೂ ಅಧಿಕ ಸಮಯದಿಂದ ದಿನಗೂಲಿ ಸೇವೆಯಲ್ಲಿ ಮುಂದುವರಿಸಲಾಗಿದೆ. ಹಾಗಾಗಿ ಅವರು ಸೇವೆ ಕಾಯಂಗೆ ಅನರ್ಹರು ಎಂದು ವಾದಿಸಿತ್ತು.

ಇದೀಗ ಸರ್ಕಾರದ ವಾದ ತಳ್ಳಿ ಹಾಕಿರುವ ನ್ಯಾಯಪೀಠ, ಈ ಪ್ರಕರಣದಲ್ಲಿ 2002/2005ರ ಯೋಜನೆಗಳಂತೆ ಅರ್ಜಿದಾರರು ಸೇವೆ ಖಾಯಂಮಾತಿಗೆ ಅರ್ಹರಾಗಿದ್ದಾರೆ. ಅವರ ಸೇವೆ ಕಾಯಂಗೊಂಡಿದ್ದು, ಅವರ ಕೆಲಸದ ಸ್ವರೂಪ ಮತ್ತು ಸೇವೆ ಮುಂದುವರಿಕೆ ಬಗ್ಗೆ ನಿರ್ಧರಿಸಬೇಕಿದೆ. ಅರ್ಜಿದಾರರನ್ನು ಇತರೆ ಸಿಬ್ಬಂದಿಯಂತೆ ಸಮಾನವಾಗಿ ಕಾಣಬೇಕಿದೆ ಎಂದು ಅಭಿಪ್ರಾಯಪಟ್ಟಿದೆ. ಅರ್ಜಿದಾರರು ಸೇವೆ ಕಾಯಂಗೆ ಅರ್ಹರಲ್ಲ ಎಂದು 2010ರ ಜೂನ್ 14 ಮತ್ತು 2012ರ ಜೂನ್ 15ರಂದು ನೀಡಿದ್ದ ಹಿಂಬರಹಗಳನ್ನು ರದ್ದುಗೊಳಿಸಿದೆ.

ಅರ್ಜಿದಾರರ ಪರ ವಕೀಲ ವಿ.ಲಕ್ಷ್ಮೀ ನಾರಾಯಣ ವಾದ ಮಂಡಿಸಿದ್ದರು. ಹಾಗೂ ಬಿಎಲ್ ವಿಕ್ರಮ್ ಬಾಲಾಜಿ ವಕಾಲತ್ತು ವಹಿಸಿದ್ದರು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

The post 10 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ನೌಕರರು ಖಾಯಂಗೆ ಅರ್ಹರು- ಹೈಕೋರ್ಟ್ ಮಹತ್ವದ ತೀರ್ಪು appeared first on Law Guide Kannada.

]]>